Wednesday, September 14, 2011

ಕೇಂದ್ರ ಸರ್ಕಾರದ ಭಾಷಾನೀತಿ ಬದಲಾಗಬೇಕೆಂದು ಒತ್ತಾಯಿಸಿ ಹಕ್ಕೊತ್ತಾಯ ಪತ್ರ ಸಲ್ಲಿಕೆ

೨೦೦೬ ರಿಂದ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ಭಾಷಾ ತಾರತಮ್ಯದಿಂದಾಗಿ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ವೇದಿಕೆಯು ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಾ ಬಂದಿದ್ದೇವೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹಿಂದಿ ಹೇರಿಕೆಯ ವಿರುದ್ಧ ಹೋರಾಟವನ್ನು ನಡೆಸಿದ್ದೇವೆ.

ಇದರ ಅಂಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹೋರಾಟವನ್ನು ನಡೆಸಿದ ನಂತರ ರಾಜ್ಯಪಾಲರಾದ ಶ್ರೀ ಹಂಸರಾಜ್ ಭಾರಧ್ವಜ್ ಅವರಿಗೆ  ಕೇಂದ್ರ ಸರ್ಕಾರದ ಭಾಷಾನೀತಿಯನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ನಮ್ಮ ಹಕ್ಕೂತ್ತಾಯ ಪತ್ರವನ್ನು ನೀಡಲಾಯಿತು. ಅದರ ಪ್ರತಿಯನ್ನು ಇಲ್ಲಿವೆ: