Monday, January 23, 2012

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಗೆ ಆಗ್ರಹ.

ಕೋಲಾರ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಬವಣೆ ನೀಗಿಸಲು ಪರಮಶಿವಯ್ಯ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಮಾಲೂರಿನಲ್ಲಿ ೨೩-೦೧-೨೦೧೨ರಂದು ಕ.ರವೇ. ಇಂದ ದೊಡ್ಡ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಬೆಂಗಳೂರು ರಸ್ತೆಯ ಡಾ.ವೃತ್ತದಿಂದ ಭಾರಿ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಬಸ್ ನಿಲ್ದಾಣದ ಮಾರಿಕಾಂಬ ಮಹಾದ್ವಾರದ ಬಳಿ ಜಮಾಯಿಸಿ ಬಹಿರಂಗ ಸಭೆ ನಡೆಸಿದರು.

ಇದರ ವರದಿಯನ್ನು ಇಲ್ಲಿ ನೋಡಿ.

Thursday, January 12, 2012

ಡಾ. ಸರೋಜಿನಿ ಮಹಿಷಿ ವರದಿ ಅನ್ವಯ ಕನ್ನಡಿಗರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಕೊಪ್ಪಳ ಜಿಲ್ಲೆಯಲ್ಲಿರುವ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಕೆಲಸವಿಲ್ಲ. ಕನ್ನಡಿಗರಿಂದ ಭೂಮಿ ಪಡೆವಾಗ ಬರೆದುಕೊಟ್ಟಿದ್ದ ಮುಚ್ಚಳಿಕೆಯನ್ನು ಗಾಳಿಗೆ ತೂರಿ ಎಲ್ಲಿಂದಲೋ ಬಂದವರಿಗೆ ಕೆಲಸಕೊಡುತ್ತಿದ್ದಾರೆ.

ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿ ಕೊಪ್ಪಳ ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ